ಬೀದರ್ : ಬೆಳೆ ಹಾನಿ ಸಮೀಕ್ಷೆ ಸಮರ್ಪಕವಾಗಿ ನಡೆಯಲಿ ಎಕರೆಗೆ 50 ಸಾವಿರ ಪರಿಹಾರ ಘೋಷಿಸಿಸಿ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ.
ಬೀದರ್, ಆ.23: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಬಿತ್ತನೆ ಮಾಡಿರುವ ಬೆಳೆಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಬೀದರ್ (ದ) ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಇಂದು ಅಷ್ಟೂರ, ಮಲ್ಕಾಪುರ, ಸುಲ್ತಾನಪುರ ಗ್ರಾಮಗಳಿಗೆ ಭೇಟಿ ನೀಡಿ ರೈತರ ಜಮೀನುಗಳಲ್ಲಿ ಬೆಳೆಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು…
ಅಧಿಕಾರಿಗಳೊಂದಿಗೆ ವಿವಿಧ ಗ್ರಾಮಗಳಿಗೆ ತೆರಳಿದ ಶಾಸಕರು, ಜಮೀನುಗಳಿಗೆ ಭೇಟಿ ನೀಡಿ ಮಳೆ ಕೊರತೆಯಿಂದ ಒಣಗುತ್ತಿರುವ ಬೆಳೆಗಳು, ಬೆಳೆಗಳ ಬೆಳವಣಿಗೆ ಹಾಗೂ ಹಾನಿಯ ಪ್ರಮಾಣವನ್ನು ಖುದ್ದಾಗಿ ವೀಕ್ಷಿಸಿದರು. ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ, ಬಿತ್ತನೆಗೆ ತಗುಲಿರುವ ವೆಚ್ಚ, ಮಳೆಯ ಪ್ರಮಾಣ, ಬೆಳೆಗಳ ಪ್ರಸ್ತುತ ಸ್ಥಿತಿ ಹಾಗೂ ಎದುರಾಗಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದುಕೊಂಡರು…
ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಕಾರಣ ಬಿತ್ತನೆ ಮಾಡಿದ ಬೆಳೆಗಳು ಬೆಳವಣಿಗೆ ಕಾಣದೆ ರೈತರು ನಷ್ಟ ಅನುಭವಿಸುವಂತಾಗಿದೆ ಎಂದು ರೈತರು ಶಾಸಕರ ಗಮನಕ್ಕೆ ತಂದರು. ರೈತರ ಅಹವಾಲುಗಳನ್ನು ಆಲಿಸಿದ ಶಾಸಕರು, ರೈತರ ಸಂಕಷ್ಟವನ್ನು ಸರ್ಕಾರದ ಗಮನಕ್ಕೆ ತಂದು ಅಗತ್ಯ ಪರಿಹಾರ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುವುದಾಗಿ ಭರವಸೆ ನೀಡಿದರು…





